ಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

 


ಗುಜರಾತ್‌: ಗುಜರಾತ್‌ನ ಏಕತಾ ನಗರದಲ್ಲಿ ʻಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ  ಅವರು ಉದ್ಘಾಟಿಸಿದರು.

ರಾಜ್ಯ ಕ್ರಿಯಾ ಯೋಜನೆಗಳ ಮೂಲಕ ಪ್ಲಾಸ್ಟಿಕ್ ಮಾಲಿನ್ಯದ ನಿರ್ಮೂಲನೆ ಮುಂತಾದ ವಿಷಯಗಳ ಕುರಿತು ಕೆಲವು ಉತ್ತಮ ನೀತಿಗಳನ್ನು ರೂಪಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹೆಚ್ಚಿನ ಹೊಂದಾಣಿಕೆ ಬೆಳೆಸಲು ಈ ಸಮ್ಮೇಳನವನ್ನು ಆಯೋಜಿಸ ಲಾಗಿದೆ.

ನಾಶವಾಗುತ್ತಿರುವ ಭೂಮಿ ಮತ್ತು ವನ್ಯಜೀವಿ ಸಂರಕ್ಷಣೆಗೆ ವಿಶೇಷ ಒತ್ತು ನೀಡುವ ಮೂಲಕ ಅರಣ್ಯ ಪ್ರದೇಶವನ್ನು ಹೆಚ್ಚಿಸಲು ಇದು ಗಮನಹರಿಸುತ್ತದೆ. ಎರಡು ದಿನಗಳ ಸಮ್ಮೇಳನವು ಸೆ.23-24 ರಂದು ನಡೆಯಲಿದೆ.

ಈ ವರ್ಷ ಜುಲೈನಿಂದ ಆಯ್ದ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸ ಲಾಗಿದ್ದು, ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧದ ಹೋರಾಟದಲ್ಲಿ ಭಾರತವು ಜಾಗತಿಕವಾಗಿ ಮುಂದುವರೆದಿದೆ. ಏಕ-ಬಳಕೆಯ ಪ್ಲಾಸ್ಟಿಕ್‌ಗಳು ಸಾಮಾನ್ಯವಾಗಿ ಒಂದೇ ಬಾರಿ ಬಳಸಿದ ನಂತರ ಎಸೆಯಲ್ಪಡುತ್ತವೆ. ಇವುಗಳನ್ನು ಮರುಬಳಕೆ ಮಾಡಲು ಸಾಧ್ಯವಿಲ್ಲ.


Post a Comment

Previous Post Next Post