ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

 ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟನೆ, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

                   ಕೆಂಪೇಗೌಡರ ಪ್ರತಿಮೆ

By : Rekha.M
Online Desk

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟಿಸಲು, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಈ ಬಗ್ಗೆ ನಿನ್ನೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಅವರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನ.11ರಂದು ಕೆಂಪೇಗೌಡ ಏರ್​​ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ನಿನ್ನೆ ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.



Post a Comment

Previous Post Next Post