ಶಿವಮೊಗ್ಗ: ಕಾಲೇಜು ಕ್ಯಾಂಪಸ್ ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್ ತೊಲಗಿಸಬೇಕು: ಸುಧೀರ್ ಮುರುಳಿ.

ಶಿವಮೊಗ್ಗ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಕ್ಷದ ಚೌಕಟ್ಟನ್ನು ಮೀರಿ ಸಾಮಾಜಿಕ ಹೊಣೆಗಾರಿಕೆಯ ಯಾತ್ರೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಸುಧೀರ್ ಮುರುಳಿ ತಿಳಿಸಿದರು. ಅವರು ಇಂದು ಸಂಜೆ ನಗರದ  ಶಿವಪ್ಪನಾಯಕ ವೃತ್ತದಲ್ಲಿ ಶಿವಮೊಗ್ಗ ನಗರ ಎನ್. ಎಸ್.ಯು. ಐ. ವತಿಯಿಂದ ಆಯೋಜಿಸಿದ್ದ ಭಾರತ್ ಜೋಡೋ ಯತ್ರೆಯ ಸಮಾರೋಪ ಸಮಾರಂಭ ಹಾಗೂ ರಾಷ್ಟ್ರಪತಿ ಮಹಾತ್ಮಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾನಾಡಿದರು. ಬಿಜೆಪಿ 8 ವರ್ಷಗಳ ಹಿಂದೆ 'ಬಿಜೆಪಿಯ ಭರವಸೆ' ಎಂಬ ಘೋಷವಾಕ್ಯದಡಿ ಅಧಿಕಾರಕ್ಕೆ ಬಂತು. ಅಲ್ಲಿಂದ ಇಲ್ಲಿಯವರೆಗೂ ಎಲ್ಲವನ್ನೂ ಭರವಸೆಗಳಲ್ಲೆ ಉಳಿಸಿದೆ. 2014 ರಲ್ಲಿ 5 ರೂ. ಗೆ ಏರಿಕೆಯಾಗಿದೆ. 60 ರೂ. ಗೆ ಸಿಗುತ್ತಿದ್ದ ಪೆಟ್ರೋಲ್ 100 ರೂ. ನ ಗಡಿ ದಾಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡಲಾಗುತ್ತಿದೆ ಎಂದರು.
    ಕಾಂಗ್ರೆಸ್ ವಕ್ತಾರ ಸುಧೀರ್ ಮುರುಳಿ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿರುವುದು.

        ಬಿಜೆಪಿ ಸರ್ಕಾರ, ಅವರ ಅನುಕೂಲಕ್ಕಾಗಿ ಸರ್ಕಾರ ನಡೆಯುತ್ತಿದೆ. ಅವರ ಕಂಪನಿಗಳಿಗಾಗಿರುವ 18  ಸಾವಿರ ಕೋಟಿ ನಷ್ಟವನ್ನು ಭರಿಸಲು ಸಾರ್ವಜನಿಕ ಉದ್ದಿಮೆಗಳಿಗೆ ಬೀಗ ಹಾಕಲಾಗುತ್ತಿದೆ. ಗಾಂಧಿಯವರನ್ನು ಕೊಂದಿದ್ದು ಗೋಡ್ಸೆ ಎಂಬ ಒಬ್ಬ ವ್ಯಕ್ತಿಯಲ್ಲ. ಅಂದು ದೇಶವಿಭಜನೆಗೆ ಕಾರಣವಾಗಿದ್ದ ಹಿಂದೂ ಮಹಾಸಭಾ 1937 ರ ಸಭೆಯಲ್ಲಿ ದೇಶವಿಭಜನೆಯ ನಿರ್ಧಾರ ಕೈಗೊಂಡಿತ್ತು. ಡಾ. ಬಿ. ಆರ್. ಅಂಬೆಡ್ಕರ್ ಅವರನ್ನು ಸಂವಿಧಾನ ರಚನಾಸಭೆಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಅವರನ್ನು ಸಂವಿಧಾನ ರಚನಾ ಸಮಿತಿ ಸಭೆಯ ಅಧ್ಯಕ್ಷರನ್ನಾಗಿ ಮಾಡಿದ್ದರಿಂದ ಗೋಡ್ಸೆಯ ರೂಪದಲ್ಲಿ ಒಂದು ಸಿದ್ದಾಂತವೇ ಗಾಂಧಿಯವರನ್ನು ಕೊಂದಿತ್ತು ಎಂದರು.
          ಕಾಂಗ್ರೆಸ್ ಈ ಹಿಂದೆ ಎರಡು ಬಾರಿ ಶಿಕ್ಷಣ ನೀತಿಗಳನ್ನು ರೂಪಿಸಿದೆ. ಮೊದಲು ರೂಪಿಸಿದ ಶಿಕ್ಷಣ ನೀತಿಯಲ್ಲಿ ಸರ್ವರಿಗೂ ಶಿಕ್ಷಣದ ಗುರಿ ಹೊಂದಲಾಗಿತ್ತು. 1983 ರಲ್ಲಿ ರೂಪಿಸಿದ ಎರಡನೇ ಶಿಕ್ಷಣ ನೀತಿ ಜಾಗತಿಕ ಮಾರಿಕಟ್ಟೆಗೆ ಅನಿಕೂಲವಾಗುವಂತಹ ಶಿಕ್ಷಣ ಒದಗಿಸಿದರೆ, ಕೊರೊನಾ ಸಂದರ್ಭದಲ್ಲಿ ಯಾವುದೇ ಚರ್ಚೆ ಇಲ್ಲದೆ ಜಾರಿಗೆ ತಂದ ಎನ್ ಇ ಪಿ, ಬಡವರ, ದಲಿತ, ಅಲ್ಪಸಂಖ್ಯಾತರನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
   ಶಿವಪ್ಪ ನಾಯಕ ವೃತ್ತದಲ್ಲಿ  ಎನ್.ಎಸ್.ಯು. ಐ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಪುಣ್ಯಸ್ಮರಣ ಕಾರ್ಯಕ್ರಮ.
        
ಶಿವಮೊಗ್ಗದ ನೆಲದಲ್ಲಿ ಸ್ವಾತಂತ್ರ್ಯ ವೀರರು ಹುಟ್ಟಿದ್ದಾರೆ. ಜಾತ್ಯಾತೀತ ನಿಲವುಗಳ ನೆಲ. ಸಮಾಜವಾದಿಗಳ ತವರು. ಇಂತಹ ನೆಲದ ಕಾಲೇಜು ಕ್ಯಾಂಪಸ್ ಗಳಲ್ಲಿ ಇಂದು ಗೋಡ್ಸೆ ವೈರಸ್ ಹರಡಲಾಗಿತ್ತಿದೆ. ಇದನು ತಡೆಯಬೇಕು. ಗಾಂಧಿ ಚಿಂತನೆಗಳು ಮೊಳಗಬೇಕು. ಆ ನಿಟ್ಟಿನಲ್ಲೆ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮೂಲಕ ಸಂದೆಶ ನೀಡಿದ್ದಾರೆ. ಯುವಕರು ಅದನ್ನು ಅನುಸರಿಸಬೇಕು ಎಂದರು.
                    ಕಾರ್ಯಕ್ರಮದಲ್ಲಿ ಮುಖ್ಯಾ ಅಥಿತಿಗಳಾಗಿ ಹಲವರು ಭಾಗಿಯಾಗಿದ್ದರು.

            ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಮಾತನಾಡಿ, ರಾಹುಲ್ ಗಾಂಧಿಯವರು 138 ದಿನಗಳ ಕಾಲ ದೇಶದ ಉದ್ದಗಲಕ್ಕೂ 4084 ಕಿ. ಮೀ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ. ಇದು ಪಕ್ಸ್ದ ಕಾರ್ಯಕ್ರಮವಲ್ಲ, ದೇಶದ ಮನಸ್ಸುಗಳನ್ನು ಒಂದುಗೂಡಿಸುವ ಯಾತ್ರೆ. ಅದನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಬಣ್ಣಿಸಿದರು. ರಾಜ್ಯ ಕಾಂಗ್ರೆಸ್ ವಕ್ತಾರ ಬಿ.ಎ ರಮೇಶ್ ಹೆಗ್ಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಪ್ರಮುಖರಾದ ಎಸ್.ಪಿ.ದಿನೇಶ್, ಅಡ್ಡು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕಲೀಮ್ ಪಾಷಾ ಹಾಗೂ ದೀಪಕ್ ಸಿಂಗ್, ಅಲ್ಪಸಂಖ್ಯಾತರ ನಾಯಕರಾದ ಮೊಹಮ್ಮದ್ ನಿಹಾಲ್, ಆರಿಫ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ರವಿಕುಮಾರ್, ಎನ್.ಎಸ್.ಯು. ಐ ಜಿಲ್ಲಾಧ್ಯಾಕ್ಷ ವಿಜಯಕುಮಾರ್, ರವಿ ಕಾಟಿಕೆರೆ, ಚರಣ್, ಹರ್ಷಿತ್, ಕೆ. ಚೇತನ್, ಸಿ. ಜಿ. ಮಧುಸೂದನ್, ಶಿವು ಮಲಗುಪ್ಪ, ಗಿರೀಶ್, ವಿಕ್ರಂ, ರವಿ ಸೇರಿದಂತೆ ಹಲವರಿದ್ದರು.

Post a Comment

Previous Post Next Post