ಶಿವಮೊಗ್ಗ: ವಿಐಎಸ್ಎಲ್ ಕಾರ್ಮಿಕರೇ ಆತಂಕ ಬೇಡ ಎಂದ ಸಿಎಂ ಬೊಮ್ಮಾಯಿ ನೀಡಿದ ಭರವಸೆಯೇನು?

 ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನಾರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು  ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಇಂದು ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಖು ಸ್ಥಾಪನೆ ನೆರವೇರಿಸುವ ಹಿನ್ನೆಲೆಯಲ್ಲಿ ಬಂದಾಗ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

                                        ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ವಿಐಎಸ್ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಅದಿಕಾರಿಗಳೊಂದಿಗೆ ಮಾತನಾಡಿದೆ. ಮತ್ತು ಇಂದು ಕೂಡ ಕಾರ್ಖಾನೆಯ ಕಾರ್ಮಿಕರು ಹಾಗೆಯೇ ಅಧಿಕಾರಿಗಳ ನಿಯೋಗವು  ತಮ್ಮನ್ನು ಬೇಟಿ ಮಾಡಲಿದೆ. ಅವರೊಂದಿಗೆ ಚರ್ಚಿಸುತ್ತೇನೆ. ಹಾಗೆಯೇ ಕಬ್ಬಿಣ ಮತ್ತು ಉಕ್ಕು ಉತ್ಪಾದನೆಯ ಉದ್ಯಮಿಗಳ ಜೊತೆಯೂ ಸಭೆ ನಡೆಸುತ್ತೇನೆ. ಶಿವಮೊಗ್ಗದ ಜನಪ್ರತಿನಿಧಿಗಳ ಜೊತೆಯೂ ಮಾತನಾಡುತ್ತೇನೆ. ಉನ್ನತ ಮಟ್ಟದ ಸಭೆ ಕರೆದು ಅಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಕಾರ್ಖಾನೆಯನ್ನು ಪುನಾರಾರಂಭಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಮನವಿಯನ್ನು ಕೆಂದ್ರದ ಸಚಿವರು ಒಪ್ಪುತ್ತಾರೆ. ಈ ವಾರದಲ್ಲಿಯೇ ಈ ಬಗ್ಗೆ ಸಂಪೂರ್ಣ ಕಾರ್ಯೋನ್ಮುಖನಾಗುತ್ತೇನೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದರು.

Post a Comment

Previous Post Next Post