ಶಿವಮೊಗ್ಗ: ನಿರುದ್ಯೋಗ ಪದವೀದರ ಯುವಕರಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಎನ್ಎಸ್ ಯುಐ ವತಿಯಿಂದ ಸಂಭ್ರಮಾಚರಣೆ

ಕಾಂಗ್ರೆಸ್ 4ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ 'ಯುವನಿಧಿ' ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಎನ್.ಎಸ್.ಯು. ಐ ಕಾರ್ಯಕರ್ತರು ಇಲ್ಲಿನ ಭಗವಾನ್ ಮಹಾವೀರ ವೃತ್ತದಲ್ಲಿ ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ. ಬಿಜೆಪಿ ಸರ್ಕಾರ ಬಂದ ಮೆಲೆ  ನಿರುದ್ಯೋಗ ತಾಂಡವವಾಡುತ್ತಿದೆ.  ವಿದ್ಯಾವಂತ ಯುವಕರು ನಿರುದ್ಯೋಗದಿಂದ ಭ್ರಮನಿರಸಕ್ಕೊಳ್ಗಾಗಿದ್ದಾರೆ. ಅವರಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿಯವರು ಯುವನಿಧಿ ಅಡಿಯಲ್ಲಿ ಘೋಷಿಸಿರುವ ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂ. ಗಳ ನಿರುದ್ಯೋಗ ಭತ್ಯೆ ಆಶಾಕಿರಣವಾಗಿದೆ ಎಂದರು.


ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಕಾಂಗ್ರೆಸ್ ಜನಪರವಾಗಿರುವ ಪಕ್ಷ. ಕಾಂಗ್ರೆಸ್ ಆಡಳಿತ ನಡೆಸಿದಾಗ ಎಂದೂ ಜನವಿರೋಧಿಯಾಗಿ ನಡೆದುಕೊಂಡಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಹುತೇಕ ಎಲ್ಲಾ ಭರವಸೆಗಳನ್ನೂ ಈಡೇರಿಸಿತ್ತು. ಈಗ ನಿರುದ್ಯೋಗಿ ಯುವಕರಿಗೆ ಆಸರೆಯಾಗಲಿ ಎಂದು ಯುವನಿಧಿ ಯೋಜನೆಯನ್ನು ಘೋಷಿಸಿದ್ದಾರೆ. ಯುವಕರು ಕಾಂಗ್ರೆಸ್ ಪರವಾಗಿರಬೇಕೆಂದು ಮನವಿ ಮಾಡಿದರು.

ಮಾಜಿ ವಿಧಾನ ಸಭೆ ಸದಸ್ಯ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯದ ಜನತೆಗೆ ಮೂರು ಗ್ರಾರಂಟಿಗಳನ್ನು ನೀಡಿದೆ. ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ಭತ್ಯೆ, ಪ್ರತಿ ವ್ಯಕ್ತಿಗೆ ತಲಾ 10 ಕೆಜ಼ಿ ಅಕ್ಕಿ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗ್ಯಾರಂಟಿಯನ್ನು ನೀಡಿದೆ. ಈಗ ನಾಲ್ಕನೇ ಗ್ಯಾರಂಟಿಯಾಗಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 1500-3000 ರೂ. ಗಳ ನಿರುದ್ಯೋಗ ಭತ್ಯೆಯ ಗ್ಯಾರಂಟಿ ನೀಡುತ್ತಿದ್ದು, ಕಾಂಗ್ರೆಸ್ ಎಂದಿಗೂ ಜನಪರ, ಯುವಪರ ಪಕ್ಷವಾಗಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಎನ್. ರಮೇಶ್, ಎಸ್.ಪಿ ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದಾಗಿ ಇಂದು ದೇಶಾದ್ಯಂತ ಯುವಕರು ನುರುದ್ಯೋಗಿಗಳಾಗಿದ್ದಾರೆ. ಬಿಜೆಪಿ ಉದ್ಯೋಗ  ಸೃಷ್ಟಿಸುವ ಬದಲು ಸೃಷ್ಟಿಸುತ್ತಿದೆ. ಕಾಂಗ್ರೆಸ್ ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತದೆ. ಯುವಜನತೆ ಬಿಜೆಪಿಯ ದುರಾಡಳಿತವನ್ನು ಖಂಡಿಸಬೇಕೆಂದರು.

ಸಂಭ್ರಮಾಚರಣೆಯ ನೇತೃತ್ವವನ್ನು ಜಿಲ್ಲಾ ಎನ್.ಎಸ್.ಯು. ಐ ಅಧ್ಯಕ್ಷ ವಿಜಯ್ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಕಲೀಂ ಪಾಶಾ, ವಿಜಯಕುಮಾರ್ (ದನಿ), ಜಿ ಪಲ್ಲವಿ, ವಿಶ್ವನಾಥ್ ಕಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಶರುಗಳಾದ ದೀಪಕ್ ಸಿಂಗ್, ಕಲೀಮ್ ಪಾಷಾ, ಎನ್.ಎಸ್.ಯು. ಐ ಜಿಲ್ಲಾಧ್ಯಾಕ್ಷ ವಿಜಯ್, ಹರ್ಷಿತ್, ಕಾಟಿಕೆರೆ ರವಿ, ಅಬ್ದುಲ್, ವರುಣ್ ವಿ ಪಂಡಿತ್, ಕುಮಾರ್, ಟೋಫಿಕ್, ಅಭಿ, ಚಂದ್ರ ಜಿ ರಾವ್, ಚರಣ್, ಕೆ.ಚೇತನ್, ಸಿಜ಼ಿ. ಮಧುಸೂದನ್ ಸೇರಿದಂತೆ ಹಲವರಿದ್ದರು.

Post a Comment

Previous Post Next Post