ಮೈಸೂರು ಪಶ್ಚಿಮ ಆರ್.ಟಿ.ಓ ಕಛೇರಿಯಲ್ಲಿ ಅನಧಿಕೃತ ನೌಕರರ ಹಾವಳಿ 25 ಮಂದಿ ವಿರುದ್ಧ ಎಫ್.ಐ.ಆರ್ ದಾಖಲು


 ಮೈಸೂರು: ಮೈಸೂರು ಪಶ್ಚಿಮ ಆರ್.ಟಿ.ಓ ಕಛೇರಿಯಲ್ಲಿ ಸರ್ಕಾರಿ ಅಧಿಕಾರಿ ಮತ್ತು ನೌಕರರರಂತೆ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸುತ್ತಿರುವ ಅನಧಿಕೃತ ವ್ಯಕ್ತಿಗಳು ಮತ್ತು ಇವರಿಗೆ ಸಹಕರಿಸುತ್ತಿರುವ ಇಲಾಖೆಯ ಮುಖ್ಯಸ್ಥರಾದ ಮೈಸೂರು ಸಾರಿಗೆ ವಿಭಾಗದ ಮುಖ್ಯಸ್ಥರಾದ ಜಂಟಿ ಸಾರಿಗೆ ಆಯುಕ್ತರು ಮತ್ತು ಮೈಸೂರು ಪಶ್ಚಿಮ ಸಾರಿಗೆ ಕಛೇರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಿರುದ್ಧ ದೂರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನ ಪಶ್ಚಿಮ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಕೆಲವು ಅನಧಿಕೃತ ವ್ಯಕ್ತಿಗಳು ಸರ್ಕಾರಿ ಅಧಿಕಾರಿ ಮತ್ತು ನೌಕರರಂತೆ ಕೆಲಸ ಮಾಡುತ್ತಾ, ಸರ್ಕಾರದ ಪೀಠೋಪಕರಣಗಳನ್ನು ಸೇರಿದಂತೆ ಕಂಪ್ಯೂಟರ್ಗಳನ್ನು ಉಪಯೋಗಿಸಿ, ಸರ್ಕಾರಿ ದಾಖಲೆಗಳನ್ನು ತಮಗೆ ಬೇಕಾದಂತೆ ದಾಖಲೆಗಳನ್ನು ಮಾರ್ಪಡಿಸಿ ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆ. ಈ ಕೃತ್ಯಗಳಿಗೆ ಸದರಿ ಸಾರಿಗೆ ಅಧಿಕಾರಿಗಳ ಕಚೇರಿಯ ಅಧಿಕಾರಿಗಳು ಸಹಕರಿಸುತ್ತಿದ್ದಾರೆ.

ಈ ಬಗ್ಗೆ ಹಿರಿಯ ಸಾರಿಗೆ ಅಧಿಕಾರಿಗಳಿಗೆ ದೂರರ್ಜಿಯನ್ನು ನೀಡಿದ್ದರೂ ಸಹ ಕ್ರಮ ತೆಗೆದುಕೊಂಡಿರುವುದಿಲ್ಲ. ಈ ಕೆಳಗಿನ ವ್ಯಕ್ತಿಗಳು ಅನಧಿಕೃತವಾಗಿ ಕಚೇರಿಯಲ್ಲಿರುವುದರ ಜೊತೆಗೆ ಕಚೇರಿಯ ಎಲ್ಲಾ ಕೆಲಸಗಳಲ್ಲಿಯೂ ಬೇನಾಮಿಯಾಗಿ ಭಾಗವಹಿಸುತ್ತಿದ್ದಾರೆ. ತಾವು ಸರ್ಕಾರಿ ನೌಕರರಂತೆ ನಟಿಸುವುದರ ಮೂಲಕ ವಂಚನೆ ಮಾಡುವುದು, ದಾಖಲೆಗಳನ್ನು ಮಾರ್ಪಾಡಿಸುವುದು, ಅಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ದಾಖಲೆಗಳನ್ನು ತಿದ್ದುವುದು ಮತ್ತು ಸರ್ಕಾರಿ ದಾಖಲೆಗಳಲ್ಲಿ ತಾವು ಬರೆಯುವುದು, ಸಾರ್ವಜನಿಕರನ್ನು ಮತ್ತು ಸರ್ಕಾರವನ್ನು ವಂಚಿಸುವ ಉದ್ದೇಶಕ್ಕಾಗಿ ಕಛೇರಿಯ ದಾಖಲೆಗಳ ಮೂಲಕ ಮೋಸ ಮಾಡುತ್ತಿರುವುದು ಕಂಡು ಬಂದಿರುತ್ತದೆ. ಇದು ಅಧಿಕಾರ ದುರುಪಯೋಗ ಮಾತ್ರವಲ್ಲದೇ ಭ್ರಷ್ಟರು ತಮ್ಮ ಬೇಳೆ ಬೇಯಿಸಿಕೊಳ್ಳಲು ಅನುಕೂಲವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇಷ್ಟೆಲ್ಲಾ ಕೆಲಸಗಳನ್ನು ಅನಧಿಕೃತ ನೌಕರರು ಸರ್ಕಾರಿ ಅಧಿಕಾರಿಗಳ ಮೂಗಿನಡಿ ನಡೆಯುತ್ತಿದ್ದರೂ, ಕಂಡು ಕಾಣದಂತೆ ಅವರಿಂದಲೇ ಹಣ ಪಡೆದು ಬೇಜವಬ್ದಾರಿತನದಿಂದ ಇರುವುದು ಪ್ರಾಮಾಣಿಕ ಅಧಿಕಾರಿಗಳು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇವರಿಗೆ ಸಾರಿಗೆ ಇಲಾಖೆಯ ಮುಖ್ಯಸ್ಥರಾದ ಇಲಾಖೆಯ ಸಾರಿಗೆ ಆಯುಕ್ತರು, ಮುಖ್ಯವಾಗಿ ಮೈಸೂರು ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಸಿ.ಟಿ ಮೂರ್ತಿ, ಮೈಸೂರು ಪಶ್ಚಿಮ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಶ್ರೀಮತಿ ದೇವಿಕಾ ಮತ್ತು ಇತರೆ ಸಿಬ್ಬಂದಿಗಳು ಸಹಕರಿಸುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಅಧಿಕಾರಿ, ನೌಕರರಲ್ಲದಿದ್ದರೂ, ಸರ್ಕಾರಿ ಅಧಿಕಾರಿ, ನೌಕರರಂತೆ ಕೆಲಸ ಮಾಡುತ್ತಾ, ಸರ್ಕಾರಿ ಅಧಿಕಾರಿ, ನೌಕರರಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿಸುತ್ತಾ, ವಂಚನೆ ಮಾಡುತ್ತಿರುವ ಮೇಲ್ಕಂಡ ವ್ಯಕ್ತಿಗಳ ಮತ್ತು ಇವರಿಗೆ ಸಹಕರಿಸುತ್ತಿರುವ ಸಾರಿಗೆ ಇಲಾಖೆಯ ಅಧಿಕಾರಿಗಳ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿತ್ತು.

ದೂರಿನ ಹಿನ್ನಲೆಯಲ್ಲಿ ಸೋಮವಾರ (ಜುಲೈ ೩೧) ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಐಪಿಸಿ ೧೮೬೦(ಕಲಂ ೪೦೯, ೪೧೯, ೪೨೦, ೪೬೮, ೧೪೯) ಅಡಿ ಪ್ರಕರಣ ದಾಖಲಾಗಿದೆ.

Post a Comment

Previous Post Next Post