ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಅಲಂಕಾರದ ವಿಚಾರದಲ್ಲಿ ಗೊಂದಲ, ಜಮಾವಣೆಯಾದ ಜನ, ಸದ್ಯ ಪರಿಸ್ಥಿತಿ ಶಾಂತ.!

 

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ನಗರದ ಅಮೀರ್‌ ಅಹಮದ್‌ ಸರ್ಕಲ್‌ ಮತ್ತು ಶಿವಪ್ಪನಾಯಕ ಪ್ರತಿಮೆ ಸಮೀಪ ಮಾಡಿದ್ದ ಅಲಂಕಾರ (Decoration) ತೆರವು ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಇದರಿಂದ ಶುಕ್ರವಾರ ರಾತ್ರಿ ಸರ್ಕಲ್‌ ಸಮೀಪ ಎರಡು ಕಡೆಯ ಯುವಕರು ಗಂಪುಗೂಡಿ ಘೋಷಣೆ ಕೂಗಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ ಭೇಟಿ ನೀಡಿ ಎರಡೂ ಕಡೆಯವರನ್ನು ಸಮಾಧಾನಪಡಿಸಿದರು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಅಲಂಕಾರ ಸಂಬಂಧ ಗೊಂದಲ ಉಂಟಾಗಿತ್ತು. ಎರಡೂ ಕಡೆಯವರ ಜೊತೆಗೆ ಮಾತನಾಡಿದ್ದು, ಸಾಮಾಧಾನಪಡಿಸಲಾಗಿದೆ. ಸಮಸ್ಯೆ ಬಗೆಹರಿದಿದೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿಸಿದರು.

Post a Comment

Previous Post Next Post