ಶಿವಮೊಗ್ಗ: ಲೋಕಾಯುಕ್ತ;ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ.

 ಶಿವಮೊಗ್ಗ, ಜನವರಿ 12: (ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜನವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. 

ಜ. 18 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ, ಜ.19 ರಂದು ತಾಲೂಕು ಕಚೇರಿ ಪಂಚಾಯತ್ ಸಭಾಂಗಣ, ಜ. 23 ರಂದು  ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜ. 24 ರಂದು ಸಾಗರ ಪಂಚಾಯತ್ ಕಚೇರಿ ಸಭಾಂಗಣ ಮತ್ತು  ಹೊಸನಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಜ. 30 ರಂದು ಶಿವಮೊಗ್ಗ  ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

 ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ,  ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Post a Comment

أحدث أقدم