ಶಿವಮೊಗ್ಗ: ಅತಿಥಿ ಉಪನ್ಯಾಸಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ!

 ಅತಿಥಿ ಉಪನ್ಯಾಸಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ. ಸಹ್ಯಾದ್ರಿ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ. ಶಿವಮೊಗ್ಗದ ವಿದ್ಯಾನಗರ ಬಳಿ ಇರುವ ಸಹ್ಯಾದ್ರಿ ವಿಜ್ಞಾನ ಕಾಲೇಜು.ತರಗತಿ ಬಹಿಷ್ಕರಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ ನೂರಾರು ವಿದ್ಯಾರ್ಥಿಗಳು.


ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಲೇಜು ವಿದ್ಯಾರ್ಥಿಗಳು. ಕಾಲೇಜಿನ ಭೌತಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕ ಶಂಕರಾನಂದ ವಿರುದ್ಧ ಆರೋಪ. ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ, ವಿದ್ಯಾರ್ಥಿನಿಯರಿಗೆ ಮಾತ್ರ ಪಾಠ ಮಾಡುತ್ತಿದ್ದರು ಎಂದು ದೂರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ. ಅತಿಥಿ ಉಪನ್ಯಾಸಕರ ವಿರುದ್ಧ ವಿಭಾಗದ ಮುಖ್ಯಸ್ಥರಿಗೆ ದೂರು ನೀಡಿದ್ದ ವಿದ್ಯಾರ್ಥಿಗಳು. ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಇಂದು ದಿಢೀರ್ ಪ್ರತಿಭಟನೆ.

ಬೆಂಗಳೂರು- ಹೊನ್ನಾವರ ಎನ್ ಹೆಚ್-206 ತಡೆದು, ವಿದ್ಯಾರ್ಥಿಗಳ ಹೋರಾಟ. ಪ್ರತಿಭಟನೆಯಿಂದ ಬಿ.ಹೆಚ್. ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್. ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿದ ಕೋಟೆ ಪೊಲೀಸರು.

Post a Comment

أحدث أقدم