ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ಮುಂಡಗಾರು ಲತಾ ಮತ್ತು ವನಜಾಕ್ಷಿ ಬಾಳೆಹೊಳೆಯರನ್ನ ಕರೆತರುತ್ತಿದ್ದು, ಸಂಜೆ4 ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ 2 ಹೊಸನಗರ ಪೊಲೀಸ್ ಠಾಣೆಯಲ್ಲಿ 1 ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರು ಪೊಲೀಸರು ಹಾಜರಿ ಪಡಿಸಲಿದ್ದಾರೆ.
ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್ ಗೆ ಹಾಜರುಪಡಿಸಲಿದ್ದು, ಬುಧವಾರ ಹೊಸನಗರದ ಕೋರ್ಟ್ ಗೂ ಹಾಜರುಪಡಿಸಿದ ಬಳಿಕ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು, ಕರೆತರುತ್ತಿರುವ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲೇ ಲತಾ ವಿರುದ್ಧ ಆಗುಂಬೆ ಠಾಣೆಯಲ್ಲಿ ಮೂರು(12/9, 51/09 ಹಾಗೂ 03/12) ಕೇಸ್ ದಾಖಲಾಗಿವೆ. ಅದೇ ರೀತಿ ವನಜಾಕ್ಷಿ ವಿರುದ್ಧ ಸಹ ಕೇಸ್ ದಾಖಲಾಗಿದೆ.
Post a Comment